Please enable javascript. Karnataka Budget 2024: ರಾಜ್ಯ ಬಜೆಟ್‌ನಲ್ಲಿ ಹೊಸ ಜಿಲ್ಲೆ ಘೋಷಣೆ? ತುಮಕೂರು, ಬೆಳಗಾವಿ ಜಿಲ್ಲೆಗಳ ವಿಭನೆಯ ಸುಳಿವು - cm siddaramaiah likely to announce bifurcation of tumakuru and belagavi in sate budget 2024 | The Economic Times Kannada

Karnataka Budget 2024: ರಾಜ್ಯ ಬಜೆಟ್‌ನಲ್ಲಿ ಹೊಸ ಜಿಲ್ಲೆ ಘೋಷಣೆ? ತುಮಕೂರು, ಬೆಳಗಾವಿ ಜಿಲ್ಲೆಗಳ ವಿಭನೆಯ ಸುಳಿವು

Authored by ಬಾನುಪ್ರಸಾದ ಕೆ ಎನ್‌ | The Economic Times Kannada | Updated: 16 Feb 2024, 7:24 am

New District Announcement In Karnataka: ಇಂದು (ಫೆ.16) ಶುಕ್ರವಾರ ಬೆಳಗ್ಗೆ 10:15ಕ್ಕೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ 15ನೇ ಬಜೆಟ್‌ ಮಂಡಿಸಲಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಅಖಂಡ ತುಮಕೂರನ್ನು ವಿಭಜಿಸಿ ಹೊಸ ಜಿಲ್ಲೆಯನ್ನು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸರ್ಕಾರದ ಇತ್ತೀಚಿನ ಸುತ್ತೋಲೆಯಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳ ವ್ಯಾಪ್ತಿಯನ್ನು ಮರು ರಚಿಸುವ ಬಗ್ಗೆ ಉಲ್ಲೇಖಿಸಿದ್ದು, ಇದು ಬಜೆಟ್‌ನಲ್ಲಿ ಹೊಸ ಜಿಲ್ಲೆಗಳ ಘೋಷಣೆಯ ಸುಳಿವು ನೀಡಿದೆ.

 
siddaramaih
ರಾಜ್ಯ ಸರಕಾರ ಫೆ.16ರಂದು ಬಜೆಟ್‌ನಲ್ಲಿ ಅಖಂಡ ತುಮಕೂರನ್ನು ವಿಭಜಿಸಿ ಹೊಸ ಜಿಲ್ಲೆ ಘೋಷಿಸುವ ಸಾಧ್ಯತೆ ಕಂಡುಬಂದಿದೆ. ಇತ್ತೀಚೆಗೆ ಸರಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳ ವ್ಯಾಪ್ತಿಯನ್ನು ಪುನರ್‌ ರಚಿಸುವ ಬಗ್ಗೆ ಉಲ್ಲೇಖಿಸಿದ್ದು, ಇದು ಬಜೆಟ್‌ನಲ್ಲಿ ಹೊಸ ಜಿಲ್ಲೆಗಳ ಘೋಷಣೆಯ ಸುಳಿವು ನೀಡಿದೆ. 1S908ರ ನೋಂದಣಿ ಕಾಯ್ದೆಯ ಸೆಕ್ಷನ್‌ 5ರ 1 ಹಾಗೂ 2ನೇ ಉಪ ವಿಧಿಯಡಿ ದತ್ತವಾದ ಅಧಿಕಾರ ಬಳಸಿ ತುಮಕೂರು ಹಾಗೂ ಬೆಳಗಾವಿ ಜಿಲ್ಲಾ ರಚನೆ ಸಂಬಂಧ ಚಾಲ್ತಿಯಲ್ಲಿರುವ ಅಧಿಸೂಚನೆಯನ್ನು ಫೆಬ್ರವರಿ 8ರಂದು ರದ್ದುಪಡಿಸಿ, ಸರಕಾರ ಆದೇಶ ಹೊರಡಿಸಿದೆ.
ಇದು ಹೊಸ ಜಿಲ್ಲಾ ರಚನೆಗೆ ಸುದ್ದಿಗಳಿಗೆ ಬಲ ತುಂಬಿದೆ. ಅಖಂಡ ತುಮಕೂರು ವಿಭಜನೆಗೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಜಿಲ್ಲೆಯ ಕೂಗಿದೆ. ಮಧುಗಿರಿ, ತಿಪಟೂರು ಹಾಗೂ ಶಿರಾ ಜಿಲ್ಲೆಯಾಗಲು ರೇಸ್‌ನಲ್ಲಿವೆ. ವಿಶೇಷವಾಗಿ ಮಧುಗಿರಿ ಜಿಲ್ಲೆ ಘೋಷಣೆಗೆ ಗೃಹಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್‌ ಹಾಗೂ ಸಹಕಾರಿ ಸಚಿವ ಕೆ.ಎನ್‌.ರಾಜಣ್ಣ ಬಲವಿದೆ.

Karnataka Budget 2024: ಇಂದು (ಫೆ.16) ಬೆಳಗ್ಗೆ 10:15ಕ್ಕೆ ಸಿಎಂ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟ್‌ ಮಂಡನೆ

ರಾಜಣ್ಣ ಪ್ರತಿನಿಧಿಸುವ ಮಧುಗಿರಿ ಹಾಗೂ ಪರಮೇಶ್ವರ್‌ ಪ್ರತಿನಿಸುವ ಕೊರಟಗೆರೆ ಎರಡೂ ಕ್ಷೇತ್ರಗಳು ಸಂಭಾವ್ಯ ಮಧುಗಿರಿ ಜಿಲ್ಲಾ ವ್ಯಾಪ್ತಿಗೆ ಒಳಪಡುತ್ತವೆ. ಹೀಗಾಗಿ ಇಬ್ಬರು ಸಚಿವರ ಒಲವು ಮಧುಗಿರಿ ಜಿಲ್ಲಾ ಘೋಷಣೆ ಬಗ್ಗೆಯೇ ಇದೆ. ತಿಪಟೂರು ಶಾಸಕ ಕೆ.ಷಡಕ್ಷರಿ ತಿಪಟೂರು ಜಿಲ್ಲೆಗೆ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ ಶಿರಾ ಜಿಲ್ಲೆಗೆ ಪಟ್ಟು ಹಿಡಿದಿದ್ದಾರೆ.

ಪಾವಗಡ ಭಾಗದ ಜನ ಜಿಲ್ಲಾ ಕೇಂದ್ರ ತುಮಕೂರಿಗೆ ಬಂದು ಹೋಗಲು ಒಂದು ದಿನವನ್ನೇ ಮೀಸಲಿಡಬೇಕು. ಮಧುಗಿರಿ, ಶಿರಾಕ್ಕೂ ತುಮಕೂರು ಜಿಲ್ಲಾ ಕೇಂದ್ರ ದೂರ. ತಿಪಟೂರಿನ ಗಡಿಭಾಗದ ಗ್ರಾಮಗಳ ಜನ ತುಮಕೂರಿಗೆ ಬರಲು 100 ಕಿ.ಮೀ. ಪ್ರಯಾಣಿಸಬೇಕು. ಜನಸಾಮಾನ್ಯರು ಮಾತ್ರವಲ್ಲದೆ ಅಧಿಕಾರಿಗಳು ಕೂಡಾ ಜಿಲ್ಲಾ ಮಟ್ಟದ ಕಚೇರಿಗಳಿಗೆ ಅಲೆಯುವುದು ಕಷ್ಟ. ಹೀಗಾಗಿ ವಿಭಜನೆ ಅನಿವಾರ್ಯ.

ಬಾನುಪ್ರಸಾದ ಕೆ ಎನ್‌ ಅವರ ಬಗ್ಗೆ
ಬಾನುಪ್ರಸಾದ ಕೆ ಎನ್‌
ಬಾನುಪ್ರಸಾದ ಕೆ ಎನ್‌ Senior Digital Content Producer
ದಿ ಎಕನಾಮಿಕ್‌ ಟೈಮ್ಸ್‌ ಕನ್ನಡ ವೆಬ್‌ನಲ್ಲಿ ಬ್ಯುಸಿನೆಸ್‌ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2012ರಿಂದಲೂ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದಾರೆ. 2019ರ ಸೆಪ್ಟೆಂಬರ್‌ನಿಂದ ವಿಜಯ ಕರ್ನಾಟಕ ಆನ್‌ಲೈನ್‌ನಲ್ಲಿ ಪತ್ರಕರ್ತನಾಗಿ ಕೆಲಸ ಮಾಡಿದ ಅನುಭವ ಇವರಿಗಿದೆ. 2022ರ ಆಗಸ್ಟ್‌ನಿಂದ ಎಕನಾಮಿಕ್‌ ಟೈಮ್ಸ್‌ ಕನ್ನಡ ವೆಬ್‌ನಲ್ಲಿ ಪತ್ರಕರ್ತನಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಾನವಾಸಕ್ತಿ ವಿಷಯಗಳು, ಕೃಷಿ, ಹಣಕಾಸು, ಆರ್ಥಿಕತೆ, ಪರ್ಸನಲ್ ಫೈನಾನ್ಸ್‌ ವಿಷಯಗಳಲ್ಲಿ ಇವರಿಗೆ ಹೆಚ್ಚಿನ ಪರಿಣತಿ ಇದೆ. ಪ್ರವಾಸ, ಚಾರಣ, ಸಾಹಿತ್ಯ ಓದು ಇವರ ಹವ್ಯಾಸಗಳು.Read More